ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.09:
ಮಹಿಳಾ ನೌಕರರಿಗೆ ವೇತನ ಸಹಿತ ಮುಟ್ಟಿಿನ ರಜೆ ನೀಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆೆ ಹೈಕೋರ್ಟ್ ತಡೆ ನೀಡಿ ಬಳಿಕ ಕೆಲವೇ ತಾಸುಗಳಲ್ಲಿ ತಡೆ ತೆರವುಗೊಳಿಸಿದೆ.
ಸರ್ಕಾರದ ಈ ಆದೇಶ ಪ್ರಶ್ನಿಿಸಿ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿ ನ್ಯಾಾಯಮೂರ್ತಿ ಜ್ಯೋೋತಿ ಮೂಲಿಮನಿ ಅವರಿದ್ದ ಏಕ ಸದಸ್ಯ ಪೀಠ ಮಂಗಳವಾರ ಬೆಳಗಿನ ಕಲಾಪದಲ್ಲಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ.ಪ್ರಶಾಂತ್ ಕುರ್ಮಾ ಅವರು ವಾದ ಆಲಿಸಿದ ನ್ಯಾಾಯಪೀಠ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾಾತಂತ್ರ್ಯ ಹೊಂದಿದೆ ಎಂದು ಆದೇಶಿ ರಾಜ್ಯ ಸರ್ಕಾರಕ್ಕೆೆ ನೋಟಿಸ್ ಜಾರಿ ಮಾಡಿತ್ತು.
ಈ ತಡೆ ಆದೇಶ ಹೊರ ಬೀಳುತ್ತಿಿದ್ದಂತೆ ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊೊಕೇಟ್ ಜನರಲ್ ಶಶಿಕಿರಣ ಶೆಟ್ಟಿಿ, ಹೆಚ್ಚುವರಿ ಅಡ್ವೊೊಕೇಟ್ ಜನರಲ್ ಪ್ರತಿಮಾ ಹೊನ್ನಾಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ನ್ಯಾಾಯಪೀಠದ ಮುಂದೆ ಹಾಜರಾಗಿ ಪ್ರತಿವಾದಿಗಳ ಆಕ್ಷೇಪಣೆ ಸಲ್ಲಿಸದೇ ಅರ್ಜಿದಾರರ ಮಧ್ಯಂತರ ಆದೇಶ ಮಾನ್ಯ ಮಾಡಲಾಗಿದೆ ಎಂದು ಆದೇಶಕ್ಕೆೆ ತೀವ್ರ ತಕರಾರು ವ್ಯಕ್ತಪಡಿಸಿದರು.
ಮಧ್ಯಂತರ ಆದೇಶಕ್ಕೆೆ ವಿರೋಧ ವ್ಯಕ್ತಪಡಿಸಿದ ವಕೀಲ ಶಶಿಕಿರಣ ಶೆಟ್ಟಿಿ ಅವರು ಮುಟ್ಟಿಿನ ರಜೆಗೆ ಸಂಬಂಧಿಸಿದಂತೆ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀೀಂ ಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಾರಸು ಮಾಡಿದೆ. ಇದನ್ನು ಪರಿಗಣಿಸಿಯೇ ರಾಜ್ಯ ಸರ್ಕಾರ ಸಂವಿಧಾನಿಕವಾಗಿ ಕೊಡಮಾಡಲಾಗಿರುವ 142ನೇ ವಿಧಿಯಡಿ ತನ್ನ ಅಧಿಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನು ಬದ್ಧವಾಗಿಯೇ ಇದೆ. ಹೀಗಿರುವಾಗ ಸರ್ಕಾರದ ವಿಸ್ತೃತ ವಾದ ಆಲಿಸದೆಯೇ ಅಧಿಸೂಚನೆಗೆ ತಡೆ ನೀಡಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಾಯಪೀಠ ಬೆಳಗ್ಗೆೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಹಿಂದಕ್ಕೆೆ ಪಡೆಯಿತು. ಡಿ.10ರ ಬುಧವಾರ ಉಭಯ ಪಕ್ಷಗಾರರ ವಾದ ಆಲಿಸಿ ಮಧ್ಯಂತರ ತಡೆ ಆದೇಶದ ಬಗ್ಗೆೆ ಸೂಕ್ತ ನಿರ್ಣಯ ಹೊರಡಿಸಲಾಗುವುದು ಎಂದು ತಿಳಿಸಿತು.
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ಮಟ್ಟಿಿಗೆ ವೇತನ ಸಹಿತ ರಜೆ ನೀಡಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ನ.20ರಂದು ಅಧಿಸೂಚನೆ ಹೊರಡಿಸಿತ್ತು. ಇದು ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ. ಹೀಗಾಗಿ ಅಧಿಸೂಚನೆ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಮುಟ್ಟಿನ ರಜೆಗೆ ನೀಡಿದ್ದ ತಡೆ ಆದೇಶ ಕೆಲವು ತಾಸಿನಲ್ಲಿ ತೆರವುಗೊಳಿಸಿದ ಹೈಕೋರ್ಟ್

