ಸುದ್ದಿಮೂಲ ವಾರ್ತೆ ಬೆಂಗಳೂರು, ನ.23:
ರಾಜ್ಯದಲ್ಲಿ ಮುಖ್ಯಮಂತ್ರಿಿ ಬದಲಾವಣೆ ಚರ್ಚೆ ನಡೆಯುತ್ತಿಿರುವ ಬೆನ್ನಹಿಂದೆಯೇ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಾನು ಸಿಎಂ ರೇಸ್ನಲ್ಲಿ ಇದ್ದೀನಿ ಎಂದು ಪುನರುಚ್ಚರಿಸಿದ್ದಾರೆ.
ತಮ್ಮ ಗೃಹ ಕಚೇರಿಯಲ್ಲಿ ವರದಿಗಾರರ ಪ್ರಶ್ನೆೆಗಳಿಗೆ ಉತ್ತರಿಸಿದರು.
ನಾನು ಯಾವಾಗ್ಲು ರೇಸ್ ಅಲ್ಲಿ ಇರುತ್ತೇನೆ. 2013ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆೆಸ್ ಸಮಿತಿ ಅಧ್ಯಕ್ಷನಾಗಿದ್ದೆ. ಕಾಂಗ್ರೆೆಸ್ ಸರ್ಕಾರವನ್ನು ಅಧಿಕಾರಕ್ಕೆೆ ತಂದಿದ್ದೆವು. ನಾನೊಬ್ಬನೇ ಸರ್ಕಾರ ಅಧಿಕಾರಕ್ಕೆೆ ತಂದಿದ್ದು ಅಂತ ಇಲ್ಲಿಯವರೆಗೂ ನಾನು ಎಲ್ಲೂ ಹೇಳಿಲ್ಲ. ಎಲ್ಲರು ಸೇರಿ ಕೆಲಸ ಮಾಡಿದ್ದೇವು. ಜನರು ಮತ ಹಾಕಿ ಪಕ್ಷವನ್ನು ಗೆಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಪರಾಭವಗೊಂಡೆ. ಒಂದು ವೇಳೆ ನಾನು ಗೆದ್ದಿದ್ದರೆ ಏನಾಗುತ್ತಿಿತ್ತು ಗೊತ್ತಿಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಒಂದು ಅವಕಾಶ ಕೊಡುತ್ತಾಾರೆ. ಅದು ಕೆಲವು ಸಂದರ್ಭದಲ್ಲಿ ಸಾಧ್ಯವಾಗುವುದಿಲ್ಲ. ಆ ಕನಸು ಈಗ ಈಡೇರುತ್ತದೆಯೇ ಎಂಬ ಪ್ರಶ್ನೆೆಗೆ ಪ್ರತಿಕ್ರಿಿಯಿಸಿ, ನನಗೆ ಆ ಕನಸೇ ಬಿದ್ದಿಲ್ಲವಲ್ಲ ಎಂದು ಹೇಳಿದರು.
ಆಡಳಿತದಲ್ಲಿ ಹಾಗೂ ಕಾಂಗ್ರೆೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆೆ ಇಲ್ಲ. ನಮ್ಮ ನಾಯಕರನ್ನು ಭೇಟಿ ಮಾಡಿದ್ದು, ಊಟ ಮಾಡಿದ್ದರಿಂದ ಸಮಸ್ಯೆೆ ಎದುರಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಸತೀಶ್ ಜಾರಕಿಹೊಳಿ ಮನೇಲಿ ನಾವು ಐದು ಜನ ಸೇರಿ ಊಟ ಮಾಡಿದ್ದೆವು. ಅದು ತಪ್ಪಾಾ. ಭೇಟಿ ವೇಳೆ ರಾಜಕೀಯನೂ ಮಾತಾಡಿರುತ್ತೇವೆ. ಸರ್ಕಾರದಲ್ಲಿ ಮಂತ್ರಿಿಗಳಿರುವುದರಿಂದ ಇಲಾಖೆಯಲ್ಲಿ ಏನೆಲ್ಲ ಕೆಲಸಗಳಾಗಬೇಕು ಅದರ ಬಗ್ಗೆೆನು ಚರ್ಚೆ ಮಾಡಲಾಗುತ್ತದೆ. ಭೇಟಿಯಾದಾಗ ಏನು ಮಾತಾಡಬಾರದೆ. ಯಾಕೆ ನಿಮಗೆ ಇಷ್ಟೊೊಂದು ಆಸಕ್ತಿಿ ಎಂದು ಪ್ರಶ್ನಿಿಸಿದ ಅವರು, ಕಾಂಗ್ರೆೆಸ್ ಪಕ್ಷದಲ್ಲಿ ಹೈಕಮಾಂಡ್ ಬಿಟ್ಟು ಏನು ತೀರ್ಮಾನಗಳಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆೆಸ್ ಹೈಕಮಾಂಡ್ನವರು ಇಲ್ಲಿವರೆಗೂ ನಾಯಕತ್ವ ಬದಲಾವಣೆ ಆಗುತ್ತೆೆ, ಸಂಪುಟ ಪುನರ್ ರಚನೆ ಆಗುತ್ತೆೆ ಅಂತ ಎಲ್ಲಿಯಾದರೂ ಹೇಳಿದ್ದಾಾರೆಯೇ ಎಂದು ಮಾಧ್ಯಮದವರನ್ನೇ ಅವರು ಪ್ರಶ್ನಿಿಸಿದರು.
ಮುಖ್ಯಮಂತ್ರಿಿಗಳನ್ನು ಆಯ್ಕೆೆ ಮಾಡುವ ಸಂದರ್ಭದಲ್ಲಿ ಎಐಸಿಸಿಯಿಂದ ವೀಕ್ಷಕರು ಬಂದಿದ್ದರು. ಸಿಎಲ್ಪಿ ಸಭೆಯಲ್ಲಿ ಅವರ ಮುಂದೆ ನಡೆದಿದೆ. ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಸಿಎಂ ಅಂತ ಹೇಳಿರಲಿಲ್ಲ. ಮಧ್ಯದಲ್ಲಿ ಬದಲಾಯಿಸುತ್ತಾಾರೆ ಎಂಬುದು ಹೈಕಮಾಂಡ್ಗೆ ಬಿಟ್ಟದ್ದು. ನಾವು ಬದಲಾವಣೆ ಮಾಡಲು ಆಗುತ್ತದೆಯೇ. ಆ ಸಂದರ್ಭ ಬಂದಾಗ ಹೈಕಮಾಂಡ್ನವರು ಮಾಡುತ್ತಾಾರೆ. ಹಿಂದೆ ಎಲ್ಲ ಮಾಡಿಲ್ಲವೇ. ಬಂಗಾರಪ್ಪ ಅವರನ್ನು ಬದಲಾಯಿಸಿ ವೀರಪ್ಪ ಮೊಯ್ಲಿಿ ಅವರನ್ನು ಮಾಡಿದ್ದರು. ಈಗ ಆ ಸಂದರ್ಭ ಬಂದಿದೆ ಅಂತ ನನಗೆ ಅನ್ನಿಿಸುತ್ತಿಿಲ್ಲ ಎಂದು ಹೇಳಿದರು.
ದಲಿತ ನಾಯಕರು ಸಿಎಂ ಆಗಬೇಕು ಎಂದು ಬಹಳ ದಿನದಿಂದ ಕೇಳುತ್ತಿಿದ್ದಾರೆ. ನಾವು ಊಟಕ್ಕೆೆ ಸೇರಿದ ತಕ್ಷಣ ಆಗಿಬಿಡುತ್ತದೆಯೇ. ನಾವೆಲ್ಲ ಸಮಾನ ಮನಸ್ಕರಿದ್ದೇವೆ. ಒಳಮೀಸಲಾತಿ ಬಗ್ಗೆೆ ಹೋರಾಟ ನಡೆಯಿತು. ನಮ್ಮ ಸಮಸ್ಯೆೆಗಳ ಚರ್ಚೆ ಮಾಡಬಾರದೇ ಎಂದು ಅವರು ಮರುಪ್ರಶ್ನಿಿಸಿದರು.
ಸಿಎಂ ಬದಲಾವಣೆಯ ಕೂಗು ಬಂದರೆ ಪರಿಗಣಿಸುವಂತೆ ಹೇಳುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆೆಗೆ.. ಆ ಸಂದರ್ಭ ಬರಲಿ. ಸಂದರ್ಭ ಇನ್ನು ಬಂದಿಲ್ಲ. ಎಐಸಿಸಿ ಅಧ್ಯಕ್ಷರನ್ನು ನಾನೇನು ಹೋಗಿ ಭೇಟಿ ಮಾಡುವುದಿಲ್ಲ. ಬೇಕಾದಾಗ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಬಂದ ನಂತರ ಪಕ್ಷದಲ್ಲಿ ಅಂತ ಬೆಳವಣಿಗೆಗಳಿದ್ದರೆ ಚರ್ಚೆ ಮಾಡಿ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾಾರೆ. ಕರ್ನಾಟಕದವರೇ ಎಐಸಿಸಿ ಅಧ್ಯಕ್ಷರಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆೆ ಅವರಿಗೆ ಗೊತ್ತಿಿರುವಷ್ಟು ಯಾರಿಗೂ ಗೊತ್ತಿಿಲ್ಲ. ಐವತ್ತು ವರ್ಷ ಸುದೀರ್ಘ ರಾಜಕಾರಣ ಮಾಡಿರುವವರು ಎಐಸಿಸಿ ಅಧ್ಯಕ್ಷರಿದ್ದಾರೆ. ತೀರ್ಮಾನಗಳನ್ನು ಮಾಡುತ್ತಾಾರೆ. ಪಕ್ಷದಲ್ಲಿ ಅಂತದ್ದೇನಾದರು ಗೊಂದಲಗಳಿದ್ದರೆ ರಾಹುಲ್ ಗಾಂಧಿ ಅವರು ಬಂದ ಬಳಿಕ ತೀರ್ಮಾನ ಮಾಡುತ್ತಾಾರೆ ಎಂದು ಹೆಳಿದರು.
ಬಾಕ್ಸ್
ಬಿಜೆಪಿ ಮನೆ ಮೂರು ಬಾಗಿಲು
ರಾಜ್ಯಪಾಲರಿಗೆ ಬಿಜೆಪಿಯವರು ದೂರು ಕೊಡುವ ವಿಚಾರದ ಬಗ್ಗೆೆ ಪ್ರತಿಕ್ರಿಿಯಿಸಿ, ಬಿಜೆಪಿಯವರನ್ನು ನಾವೇನು ಪ್ರಮಾಣ ಪತ್ರ ಕೇಳುತ್ತಿಿಲ್ಲ. ಅವರ ಮನೆ ಹೇಗಿದೆ ಅಂತ ನೋಡಿಕೊಳ್ಳಲಿ. ಅಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ ಎಂದು ವಿಜಯೇಂದ್ರ ಅವರು ಹೇಳಿಕೆ ಕೊಟ್ಟಿಿದ್ದಾರೆ. ಆ ಹೇಳಿಕೆಯ ಅಗತ್ಯ ಇದೆಯೇ. ಮೊದಲು ಅವರ ಮನೆಯ ಸಮಸ್ಯೆೆಯನ್ನು ಸರಿಪಡಿಸಿಕೊಳ್ಳಲು ಹೇಳಿ. ಆ ಮೇಲೆ ನಮ್ಮನ್ನು ಕೇಳಲಿ ಎಂದು ತಿರುಗೇಟು ನೀಡಿದರು.

