ಸುದ್ದಿಮೂಲ ವಾರ್ತೆ ಬೆಂಗಳೂರು, ನ.22:
ರಾಜ್ಯದಲ್ಲಿ ಇವತ್ತು ನಡೆಯುತ್ತಿಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಾಧ್ಯಕ್ಷ ಎಚ್.ಡಿ. ಕುಮಾರಸ್ವಾಾಮಿ ಭವಿಷ್ಯ ನುಡಿದರು.
ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಿಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾಾರೆ ಹೇಳಲಿಕ್ಕೆೆ ಆಗದಂತಹ ಪರಿಸ್ಥಿಿತಿ ರಾಜ್ಯದಲ್ಲಿ ಸೃಷ್ಟಿಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋೋಟಕ ಬೆಳವಣಿಗೆಗಳು ನಡೆಯಲಿವೆ ಎಂದರು.
ದಿನಕ್ಕೊೊಂದು, ಕ್ಷಣಕ್ಕೊೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಸಲಹೆ ಮಾಡಿದರು.
ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಲಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆೆ ನನ್ನ ಮುಖ ತೋರಿಸಲ್ಲ ಎಂದು ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಅವರು ಒತ್ತಾಾಯ ಮಾಡಿದರು.
ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಇಡೀ ಬದುಕನ್ನು ಜನರಿಗೆ ಮೀಸಲಿಟ್ಟರು. ಅವರು ಅಧಿಕಾರಕ್ಕಾಾಗಿ ಇನ್ನೊೊಬ್ಬರ ಮನೆ ಬಾಗಿಲಿಗೆ ಹೋದವರಲ್ಲಾ. ಈ ರಾಜ್ಯವನ್ನು ದೀರ್ಘ ಕಾಲ ಆಳಿದ ದೇವರಾಜು ಅರಸು ಅವರೇ ಬಂದು ನಮ್ಮ ಜೊತೆ ಕೈ ಜೋಡಿಸು ಎಂದು ಹೇಳಿದರೂ ದೇವೇಗೌಡರು ಕೇಳಲಿಲ್ಲ. ಒಂದು ಆದರ್ಶ, ಮೌಲ್ಯ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾಾ ಬಂದಿದ್ದಾರೆ. ಅಂತಹವರ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದರು. ದೇವೇಗೌಡರು ಜ್ಯೋೋತಿಷ್ಯರನ್ನ ನಂಬುತ್ತಾಾರೆ ಎಂದು ಆ ಜ್ಯೋೋತಿಷಿಗಳನ್ನು ಟ್ರ್ಯಾಾಪ್ ಮಾಡಿ ವಂಚಿಸಿದರು. ಅಲ್ಲದೆ, ಮೈಸೂರಿನಲ್ಲಿ ದೇವೇಗೌಡರು 500 ನಿವೇಶನಗಳನ್ನು ಖರೀದಿ ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು ಎಂದು ಕುಮಾರಸ್ವಾಾಮಿ ಅವರು ಆಕ್ರೋೋಶ ವ್ಯಕ್ತಪಡಿಸಿದರು.
ಗ್ಯಾಾರಂಟಿ ಹೆಸರಿನಲ್ಲಿ ದರೋಡೆ:
ರಾಜ್ಯ ಕಾಂಗ್ರೆೆಸ್ ಸರ್ಕಾರ ಗ್ಯಾಾರಂಟಿ ಹೆಸರಿನಲ್ಲಿ ಲೂಟಿ ಮಾಡುತ್ತಿಿದೆ. ಇನ್ನು ಎಷ್ಟು ದರೋಡೆ ಮಾಡುತ್ತೀರಿ? ಎಷ್ಟೊೊಂದು ತೆರಿಗೆಗಳನ್ನು ಏರಿಸಿದಿರಿ? ಎಷ್ಟೊೊಂದು ಬೆಲೆಗಳನ್ನು ಹೆಚ್ಚಳ ಮಾಡಿದಿರಿ? ಬಿ ಖಾತಾ ಎ ಖಾತಾ ತೆರಿಗೆ ಎಂದು ದೋಖಾ ಮಾಡುತ್ತಿಿದ್ದೀರಿ. ಬೆಂಗಳೂರಿನಲ್ಲಿ, ರಾಜ್ಯದಲ್ಲಿ ರಸ್ತೆೆ ಗುಂಡಿಗೆ ಬಿದ್ದು ಎಷ್ಟೋೋ ಜನ ಸಾವನಪ್ಪಿಿದ್ದಾರೆ. ಕಬ್ಬು ಬೆಳೆಗಾರರ ಕಬ್ಬಿಿಗೆ ಬೆಂಕಿ ಹಾಕಿದ್ದು ಯಾರು ಅಂತಾ ಗೊತ್ತಿಿಲ್ಲಾ. ಈ ಪಾಪ ಸುಮ್ಮನೆ ಹೋಗಲ್ಲ ಎಂದು ಕುಮಾರಸ್ವಾಾಮಿ ಆಕ್ರೋೋಶ ವ್ಯಕ್ತಪಡಿಸಿದರು.
ಜಾತಿ ಗಣತಿ ಹೆಸರಿನಲ್ಲಿ ಜನರ ವಿಭಜನೆ:
ಅಭಿವೃದ್ಧಿಿ ಹೆಸರಿನಲ್ಲಿ ರಾಜಕಾರಣ ಮಾಡಲು ಇವರಿಗೆ ಆಗುತ್ತಿಿಲ್ಲ. ಆದ್ದರಿಂದಲೇ ವಾಮಮಾರ್ಗಗಳ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡುತ್ತಿಿದ್ದಾರೆ. ಎಲ್ಲಿವೆ ಕಾಂತರಾಜು , ಜಯಪ್ರಕಾಶ್ ಹೆಗಡೆ, ಮಧುಸೂದನ್ ನಾಯ್ಕ್ ವರದಿಗಳು? ಸ್ವಲ್ಪ ಹೇಳುತ್ತೀರಾ ಮುಖ್ಯಮಂತ್ರಿಿಗಳೇ ಎಂದು ಕುಮಾರಸ್ವಾಾಮಿ ಅವರು ಹರಿಹಾಯ್ದರು.
ಸಿದ್ದರಾಮಯ್ಯ ಅವರು 25- 30 ವರ್ಷದಿಂದಲೂ ಅಧಿಕಾರದಲ್ಲಿಯೇ ಇದ್ದಾರೆ. ಈ ರಾಜ್ಯಕ್ಕೆೆ ಏನು ಕೊಡುಗೆ ನೀಡಿದ್ದಾರೆ? ಉಪ ಮುಖ್ಯಮಂತ್ರಿಿ, ಮುಖ್ಯಮಂತ್ರಿಿ, ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದೀರಿ? ಬೆಂಗಳೂರು ನಗರವನ್ನು ಹೋಳು ಮಾಡಿ ಗ್ರೇೇಟರ್ ಬೆಂಗಳೂರು ಅಂತ ಮಾಡಿ ಐವರು ಮೇಯರ್ ಗಳನ್ನ ಮಾಡಿ ಏನ್ ಮಾಡ್ತೀರಪ್ಪ ನೀವು? ಎಂದು ಅವರು ಟೀಕಾಪ್ರಹಾರ ನಡೆಸಿದರು.
ರಾಜ್ಯದ ಜನರ ಋಣ ತೀರಿಸುವೆ:
ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಅವಕಾಶ ಕೊಟ್ಟಿಿದ್ದಾರೆ. ಆಂಧ್ರಪ್ರದೇಶದ ವೈಜಾಗ್ನಲ್ಲಿ ಸ್ಟೀಲ್ ್ಯಾಕ್ಟರಿ ಪುನರಾರಂಭ ಮಾಡಿದ್ದೇನೆ. ಭದ್ರಾಾವತಿಯ ಸರ್ ಎಂ ವಿಶ್ವೇಶ್ವರಯ್ಯ ಸ್ಟೀಲ್ ್ಯಾಕ್ಟರಿಯನ್ನ ಪುನಶ್ಚೇತನ ಮಾಡಿ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು , ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾಾರೆಡ್ಡಿಿ ರವರು, ಸಂಸದ ಮಲ್ಲೇಶ್ ಬಾಬು, ಯುವ ಜನತಾದಳ ರಾಜ್ಯಾಾಧ್ಯಕ್ಷ ನಿಖಿಲ್ ಕುಮಾರಸ್ವಾಾಮಿ, ವಿವಿಧ ರಾಜ್ಯಗಳ ಪ್ರತಿನಿಧಿಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಆಹ್ವಾಾನಿತ ನಾಯಕರು, ಕಾರ್ಯಕರ್ತರು ಉಪಸ್ಥಿಿತರಿದ್ದರು.
ಜೆಡಿಎಸ್ ಬೆಳ್ಳಿಿ ಹಬ್ಬದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಭವಿಷ್ಯ ರಾಜ್ಯ ರಾಜಕಾರಣದಲ್ಲಿ ಕೆಲ ದಿನಗಳಲ್ಲೇ ಸ್ಫೋೋಟಕ ಬೆಳವಣಿಗೆ

